ಧರ್ಮಸ್ಥಳ ದೂರು ಪ್ರಕರಣ: 13 ಸ್ಥಳಗಳ ಗುರುತು, ಶೋಧ ಕಾರ್ಯ ತಾತ್ಕಾಲಿಕ ಸ್ಥಗಿತ

Coastal Mirror
0


ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಹೂಳುವಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜುಲೈ 28ರಂದು ದೂರುದಾರನನ್ನು ಭಾರಿ ಪೊಲೀಸ್ ಭದ್ರತೆಯಲ್ಲಿ ನೇತ್ರಾವತಿ ಸ್ನಾನ ಘಟ್ಟಕ್ಕೆ ಕರೆತರಲಾಯಿತು. ವಿಶೇಷ ತನಿಖಾ ತಂಡ (SIT) ಘಟನಾ ಸ್ಥಳವನ್ನು ಕೂಲಂಕುಷವಾಗಿ ಪರಿಶೀಲಿಸಿದ್ದು, ದೂರುದಾರನ ಹೇಳಿಕೆಗಳ ಆಧಾರದ ಮೇಲೆ ಒಟ್ಟು 13 ಕಡೆಗಳಲ್ಲಿ ಶವಗಳನ್ನು ಹೂತುಹಾಕಿರುವ ಸಾಧ್ಯತೆಯಿರುವ ಸ್ಥಳಗಳನ್ನು ಗುರುತು ಮಾಡಿದೆ.


ಇಂದು ಇಡೀ ದಿನ ನಡೆದ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನಾಳೆ ಮತ್ತೆ ಶೋಧ ಕಾರ್ಯ ಮುಂದುವರಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

1995 ರಿಂದ 2014ರ ಅವಧಿಯಲ್ಲಿ ಧರ್ಮಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೂರಾರು ಮೃತದೇಹಗಳನ್ನು ಬಲವಂತವಾಗಿ ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದ. ಈ ಸ್ಫೋಟಕ ಆರೋಪಗಳು ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಕರ್ನಾಟಕ ಸರ್ಕಾರವು ಕೂಡಲೇ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸಿತ್ತು.

ಗುರುತಿಸಲಾದ ಸ್ಥಳಗಳಲ್ಲಿ ಶೋಧ ಕಾರ್ಯ ಮುಂದುವರಿದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಹತ್ವದ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

Post a Comment

0 Comments

Post a Comment (0)

#buttons=(Ok, Go it!) #days=(20)

Our website uses cookies to enhance your experience. Check Now
Ok, Go it!