ಬಿಎಲ್ ಸಂತೋಷ್ ವಿರುದ್ಧ ಮಾತನಾಡಿದ್ದವನ ಒದ್ದು ಒಳಗೆ ಹಾಕಿದ್ದೇವೆ: ತಿಮರೋಡಿ ವಿರುದ್ಧ ಡಿಕೆ ಶಿವಕುಮಾರ್ ಗರಂ!

Coastal Mirror
0

 ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಧರ್ಮಸ್ಥಳದ ವಿರುದ್ಧ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಮಹೇಶ್ ತಿಮರೋಡಿ, BJP ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ (BL Santhosh) ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದರು.

ಇದೇ ವಿಚಾರವಾಗಿ ಮಾತನಾಡಿದ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು, ಬಿಎಲ್ ಸಂತೋಷ್ ವಿರುದ್ಧ ಮಾತನಾಡಲು ಆತನ ಬಳಿ ಯಾವ ದಾಖಲೆ ಇದೆ. ವಿನಃ ಕಾರಣ ಅವಹೇಳನ ಮಾಡಿದ್ದ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೇವೆ ಎಂದು ಡಿಸಿಎಂ ಹೇಳಿದ್ದಾರೆ.

ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿ.ಎಲ್.ಸಂತೋಷ್ ಬಗ್ಗೆ ಮಹೇಶ್ ತಿಮರೋಡಿ ಬಾಯಿಗೆ ಬಂದಂತೆ ಮಾತನಾಡಿದ್ದಾನೆ. ಆರೋಪಗಳನ್ನು ಮಾಡಲು ಆತನ ಬಳಿ ದಾಖಲೆ ಏನಿದೆ?. ಹೀಗಾಗಿ ಅವನನ್ನು ಒದ್ದು ಒಳಗೆ ಹಾಕಿದ್ದೇವೆ ಎಂದರು. ರಾಜಕೀಯವಾಗಿ ನಮ್ಮ ನಡುವೆ ಸಾಕಷ್ಟು ಭಿನ್ನಾಭಿಪ್ರಾಯವಿರಬಹುದು. ಆದರೆ ನಮ್ಮ ವಿರೋಧಿಗಳ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದರೆ ಅದನ್ನು ಕೇಳಿಕೊಂಡು ನಾವು ಖುಷಿಪಡುವುದಿಲ್ಲ.

ಯಾರು ಬೇಕಾದರೂ ರಾಜಕೀಯವಾಗಿ ಆರೋಪ ಮಾಡಬಹುದು ತಪ್ಪೇನಿಲ್ಲ. ಆದರೆ ಯಾರೇ ಆರೋಪ ಮಾಡುವಾಗಲೂ ದಾಖಲೆಗಳನ್ನು ಇಟ್ಟುಕೊಂಡು ಆರೋಪ ಮಾಡಲಿ. ಅದನ್ನು ಬಿಟ್ಟು ಸ್ವಾಭಿಮಾನಕ್ಕೆ ಧಕ್ಕೆ ತರುವಂತ ಮಾತುಗಳನ್ನು ಆಡಬಾರದು. ಈ ರಾಜ್ಯದಲ್ಲಿ ಯಾರ ಸ್ವಾಭಿಮಾನಕ್ಕೂ ಯಾರೂ ಧಕ್ಕೆ ತರುವಂತ ಕೆಲಸ ಮಾಡಬಾರದು ಎಂದು ಡಿಕೆ ಶಿವಕುಮಾರ್ ಹೇಳಿದರು.

Tags

Post a Comment

0 Comments

Post a Comment (0)

#buttons=(Ok, Go it!) #days=(20)

Our website uses cookies to enhance your experience. Check Now
Ok, Go it!